ಪ್ರಜಾಸ್ತ್ರ ಸುದ್ದಿ
ಪಾಟ್ನಾ: ಹೆಣ್ಮಕ್ಕಳ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಹಾರ ಸಿಎಂ ನಿತೀಶ್ ಕುಮಾರ್ ಕ್ಷಮೆ ಕೇಳಿದ್ದಾರೆ. ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಮಾತುಗಳನ್ನು ವಾಪಸ್ ಪಡೆಯುತ್ತೇನೆ. ನನ್ನ ಮಾತಿನಿಂದ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ ಅಂತಾ ಹೇಳಿದ್ದಾರೆ.
ಸದನದಲ್ಲಿ ಮಾತನಾಡುವಾಗ, ಜನಸಂಖ್ಯೆ ನಿಯಂತ್ರಣ ಹೊಂದುವಲ್ಲಿ ಮಹಿಳೆಯರು ಶಿಕ್ಷಣ ಪಡೆಯುತ್ತಿರುವುದೇ ಮಹತ್ವದ ಪಾತ್ರವಹಿಸಿದೆ. ಶಿಕ್ಷಣ ಪಡೆದ ಮಹಿಳೆಯ ಪತಿಯನ್ನು ಲೈಂಗಿಕ ಕ್ರಿಯೆಯಲ್ಲಿ ತೊಡಗದಂತೆ ತಡೆಯುತ್ತಾಳೆ. ಜನನ ಪ್ರಮಾಣ ಹೆಚ್ಚಳದಲ್ಲಿ ಪತಿಯ ಕರ್ತವ್ಯ ಇದೆ. ಜನನ ಪ್ರಮಾಣ ಕಡಿಮೆಯಾಗುತ್ತಿರುವುದಕ್ಕೆ ಮಹಿಳೆ ಶಿಕ್ಷಣ ಪಡೆಯುತ್ತಿರುವುದು ಕಾರಣ ಎನ್ನುವ ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಸಿಎಂ ನಿತೀಶ್ ಕುಮಾರ್ ಹೇಳಿಕೆ ವಿರುದ್ಧ ಕೆಂಡ ಕಾರಿದ ವಿಪಕ್ಷಗಳು ರಾಜೀನಾಮೆಗೆ ಆಗ್ರಹಿಸಿದ್ದವು. ಇಂದು ಕ್ಷಮೆ ಕೇಳುವ ಮೂಲಕ ವಿವಾದಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.