ಪ್ರಜಾಸ್ತ್ರ ಸುದ್ದಿ
ಪಾಟ್ನಾ: ಜೆಡಿಯು ನಾಯಕ, ಬಿಹಾರ ಸಿಎಂ ನಿತೀಶ್ ಕುಮಾರ್, ಬಿಜೆಪಿ ಜೊತೆಗಿನ ಮೈತ್ರಿ ಸಂಬಂಧಕ್ಕೆ ಮಂಗಳವಾರ ತೆರೆ ಎಳೆದಿದ್ದಾರೆ. ಈ ಸಂಬಂಧ ಇಂದು ಸಂಜೆ 4 ಗಂಟೆಗೆ ರಾಜ್ಯಪಾಲ ಪಘು ಚೌಹಾಣ್ ಅವರನ್ನು ಭೇಟಿಯಾಗಲಿದ್ದಾರೆ.
ಮಹಾಘಟಬಂಧನ ಮೂಲಕ ಎನ್ ಡಿಎ ಜೊತೆಗೆ ದೋಸ್ತಿ ಮಾಡಿಕೊಂಡಿದ್ದ ನಿತೀಶ್ ಕುಮಾರ್, ಅಲ್ಲಿನ ಆತಂರಿಕ ತಿಕ್ಕಾಟದಿಂದ ಹೊರ ಬರಲು ನಿರ್ಧರಿಸಿದ್ದಾರೆ. ಅಲ್ಲದೇ ಜೆಡಿಯು ಹಾಗೂ ಆರ್ ಜೆಡಿ ಒಂದಾಗುವ ಲಕ್ಷಣಗಳು ಗೋಚರವಾಗಿ. ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಅವರೊಂದಿಗಿನ ಭೇಟಿ, ಮಾತುಕಥೆಗಳು ಇದಕ್ಕೆ ಪುಷ್ಠಿ ನೀಡಿವೆ.