ಪ್ರಜಾಸ್ತ್ರ ಸುದ್ದಿ
ಅಳ್ನಾವರ: ಹಳಿಯಾಳ-ಅಳ್ನಾವರ ರಸ್ತೆಯ ಹತ್ತಿರದ ಮದ್ನಳ್ಳಿ ಗ್ರಾಮದ ಬಳಿ ತಡರಾತ್ರಿ ಎರಡು ಬೈಕ್ ಗಳ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಇದರ ಪರಿಣಾಮವಾಗಿ ಮೂವರು ಸಾವನ್ನಪ್ಪಿದ್ದಾರೆ.
ಮೃತರನ್ನು ಅಳ್ನಾವರ ಪಟ್ಟಣದ ಕಾಶೆನಟ್ಟಿ ರಸ್ತೆಯ ರಮೇಶ ರಾವುತ್, ತೆರಗಾಂವ ಗ್ರಾಮದ ಕುಮಾರ ಮಿರಾಶಿ ಹಾಗೂ ಮಂಜು ಭೂಮಿ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಮತ್ತೊಬ್ಬನಿಗೆ ಗಾಯಗಳಾಗಿದ್ದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.