ಎರಡು ಬೈಕ್ ಗಳ ನಡುವೆ ಅಪಘಾತ: ಮೂವರ ದುರ್ಮರಣ

218

ಪ್ರಜಾಸ್ತ್ರ ಸುದ್ದಿ

ಕಲಬುರಗಿ: ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ದುರ್ಮರಣವನ್ನೊಪ್ಪಿದ ಘಟನೆ ಚಿಂಚೊಳಿ ತಾಲೂಕಿ ಹೂವಿನಹಳ್ಳಿಯಲ್ಲಿ ನಡೆದಿದೆ. ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಿರೋಳ್ಳಿ ಗ್ರಾಮದ ಜಗನ್ನಾಥ್ ಚಕ್ಕುಲಿ, ಮೇಹಬೂಬ ಅಲಿ ಹಾಗೂ ಚಿಂಚೋಳಿ ತಾಲೂಕಿನ ಶಾದಿಪೂರ ಗ್ರಾಮದ ಶ್ರೀಕಾಂತ್ ಮೃತ ದುರ್ದೈವಿಗಳು. ಅಮರ ಗಾಯಗೊಂಡ ಯುವಕನಾಗಿದ್ದಾನೆ. ಅತಿವೇಗವಾಗಿ ಬೈಕ್ ಚಾಲಯಿಸಿದ್ದೆ ಈ ದುರ್ಘಟನೆಗೆ ಕಾರಣವೆಂದು ಹೇಳಲಾಗುತ್ತಿದೆ. ಸುಲೆಪೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!