ರಸ್ತೆ ಗುಂಡಿಗೆ ಬಿದ್ದು ಬಿಜೆಪಿ ಮುಖಂಡ ಸಾವು

189

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಸ್ತೆ ಗುಂಡಿಗೆ ಬಿದ್ದು ಬಿಜೆಪಿ ಮುಖಂಡರೊಬ್ಬರು ಸಾವನ್ನಪ್ಪಿರುವ ಘಟನೆ ಆನೇಕಲ್ ಹೊಸೂರು ಮುಖ್ಯ ರಸ್ತೆಯಲ್ಲಿ ನಡೆದಿದೆ. ಸಬ್ ಮಂಗಲ ನಿವಾಸಿ ಮಾದೇಶ್(50) ಮೃತ ವ್ಯಕ್ತಿಯಾಗಿದ್ದು, ಇವರು ಬಿಜೆಪಿ ಮುಖಂಡ ಸಹ ಆಗಿದ್ದಾರೆ.

ಬೈಕ್ ನಲ್ಲಿ ಮನೆಗೆ ಹೋಗುತ್ತಿರುವ ಸಂದರ್ಭದಲ್ಲಿ ಈ ಅನಾಹುತ ಸಂಭವಿಸಿದೆ. ರಸ್ತೆ ಕಾಮಗಾರಿ ಸಂದರ್ಭದಲ್ಲಿ ಗಿಡಗಳನ್ನು ತೆರವುಗೊಳಿಸಲಾಗಿದೆ. ಆಗ ತೆಗೆದ ಗುಂಡಿಗಳನ್ನು ಹಾಗೇ ಬಿಟ್ಟಿದ್ದಾರೆ. ಇದ್ರಿಂದಾಗಿ ಸಾಕಷ್ಟು ಜನರ ಸಾವು ನೋವು ಸಂಭವಿಸಿದೆ. ಆದರೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಕ್ರಮ ತೆಗೆದುಕೊಂಡಿಲ್ಲವೆಂದು ಹೇಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.




Leave a Reply

Your email address will not be published. Required fields are marked *

error: Content is protected !!