ಪ್ರಜಾಸ್ತ್ರ ಸುದ್ದಿ
ಕೊಲ್ಹಾರ: ಕಳೆದ ರಾತ್ರಿ ಬೈಕ್ ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಕೊಲ್ಹಾರ್ ಸೇತುವೆ ಬಳಿ ನಡೆದಿದೆ. ಹಿರೇಗರಸಂಗಿ ಗ್ರಾಮದ ಹಣಮಂತ ಹಿರೇಕುರಬರ ಮೃತ ಸವಾರ ಎಂದು ತಿಳಿದು ಬಂದಿದೆ.
ಬೀಳಗಿಯಿಂದ ಸ್ವಗ್ರಾಮಕ್ಕೆ ಬರುವ ಸಮಯದಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಅಲ್ದೇ, ಅಪರಿಚಿತ ವಾಹನ ಸವಾರ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆಯಲ್ಲಿ ಬೈಕ್ ಹಿಂಬದಿ ಸವಾರ ಅಶೋಕ ಕರಿಗಾರ ಎಂಬುವರಿಗೆ ಗಾಯಗಳಾಗಿದ್ದು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಲ್ಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.