ಬೈಕ್ ಡಿಕ್ಕಿ ತಪ್ಪಿಸಲು ಹೋದ ಯುವಕ ಸಾವು

332

ಪ್ರಜಾಸ್ತ್ರ ಸುದ್ದಿ

ಮಂಗಳೂರು: ಬೈಕ್ ಗೆ ಡಿಕ್ಕಿ ಹೊಡೆಯುವುದನ್ನ ತಪ್ಪಿಸಲು ಹೋಗಿ ಕಿರಾಣಿ ಅಂಗಡಿಯೊಂದಕ್ಕೆ ಹೋಗಿ ಗುದ್ದಿದ ಬೈಕ್ ಸವಾರನೊಬ್ಬ ಮೃತಪಟ್ಟ ಘಟನೆ ಪದವಿನಂಗಡಿಯಲ್ಲಿ ನಡೆದಿದೆ. ಬೊಂಡಲ್ ನ ಕೃಷ್ಣನಗರದ ನಿವಾಸಿ ಪ್ರಶಾಂತ(30) ಮೃತ ಯುವಕನೆಂದು ತಿಳಿದು ಬಂದಿದೆ.

ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಯುವಕ ಹಾರಿಬಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಿನಿಮೀಯ ರೀತಿಯಲ್ಲಿ ಅಪಘಾತ ಸಂಭವಿಸಿದೆ. ತಕ್ಷಣ ಯವಕನನ್ನ ಆಸ್ಪತ್ರೆಗೆ ದಾಖಲಿಸಲಾಯ್ತು. ಆದ್ರೆ, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.




Leave a Reply

Your email address will not be published. Required fields are marked *

error: Content is protected !!