ಜಮಖಂಡಿ: ಜಮಖಂಡಿ ತಾಲೂಕಿನ ಮಧುರಖಂಡಿ ಕ್ರಾಸ್ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು ಯೋಧರೊಬ್ಬರು ಸಾವನ್ನಪ್ಪಿದ್ದಾರೆ. ಚಿದಾನಂದ ಮಠಮತಿ ಅನ್ನೋ 25 ವರ್ಷದ ಯೋಧ ಸಾವನ್ನಪ್ಪಿದವರು ಅಂತಾ ತಿಳಿದು ಬಂದಿದೆ.
ಭಾರತೀಯ ಸೇನೆಯಲ್ಲಿದ್ದ ಚಿದಾನಂದ ಮಠಪತಿ ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ರು. ರಜೆಯ ಮೇಲೆ ಊರಿಗೆ ಬಂದಿದ್ದ ಯೋಧ ಈ ಒಂದು ಅನಾಹುತದಲ್ಲಿ ಸಾವನ್ನಪ್ಪಿದ್ದಾರೆ. ಮೃತ ಯೋಧ ಚಿದಾನಂದ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಅಡಾಳಟ್ಟಿ ಗ್ರಾಮದವರಾಗಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಜಮಖಂಡಿ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.