ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ: ಇಬ್ಬರಿಗೆ ಗಂಭೀರ ಗಾಯ

261

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿರುವ ಘಟನೆ ವಿಜಯಪುರ ನಗರದ ಜುಮನಾಳ ರಸ್ತೆಯ ದದಾಮಟ್ಟಿ ಕ್ರಾಸ್ ಬಳಿ ನಡೆದಿದೆ. ಕಾಪಾಡ್ರಿ ಯವ್ವ.. ಕಾಪಾಡ್ರಿ ಯವ್ವಾ ಎಂದು ರಸ್ತೆ ಬಿದ್ದು ಅಂಗಲಾಚಿದ ಯುವಕ ಯುವತಿ ಅಂಗಲಾಚಿದ್ದಾರೆ. ಈ ದೃಶ್ಯ ನೋಡಿದ ಪ್ರತಿಯೊಬ್ಬರ ಎದೆ ಝಲ್ ಎನ್ನುವಂತಿತ್ತು.

ಇನ್ನು ಕಾಪಾಡುವಂತೆ ಅಂಗಲಾಚುತ್ತಿದ್ದ ಯುವಕ-ಯುವತಿ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಯುವಕ ಸಚಿನ್ ಕುಂಬಾರ್ ಹಾಗೂ ಯುವತಿ ಸುಜಾತಾ ಮಠಪತಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಯುವಕ ಸಚಿನ್ ಸಾವನ್ನಪ್ಪಿದ್ದಾನೆ.‌ ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.




Leave a Reply

Your email address will not be published. Required fields are marked *

error: Content is protected !!