ಪ್ರಜಾಸ್ತ್ರ ಸುದ್ದಿ
ಸುರಪುರ: ಬೈಕ್ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ನಗರದ ಕುಂಬಾರಪೇಠಯ ಹನುಮಾನ ದೇವಸ್ಥಾನದ ಸಮೀಪ ನಡೆದಿದೆ. ಈ ವೇಳೆ ನಾಲ್ವರಿಗೆ ಗಂಭೀರ ಗಾಯಗಳಾಗಿವೆ.
ಹಸುವೊಂದು ಅಡ್ಡ ಬಂದ ಪರಿಣಾಮ ಅಪಘಾತ ಸಂಭವಿಸಿದೆ ಎನ್ನಲಾಗ್ತಿದ್ದು, ಹಸು ಬಸ್ಸಿನ ಚಕ್ರಕ್ಕೆ ಸಿಲುಕಿ ಮೃತಪಟ್ಟಿದೆ. ಗಾಯಾಳುಗಳನ್ನ ತಾಲೂಕಿನ ದೇವಾಪೂರ ಗ್ರಾಮದವರು ಎಂದು ಗುರುತಿಸಲಾಗಿದೆ.
ದೇವಾಪೂರ ಗ್ರಾಮದಿಂದ ಸುರಪುರಕ್ಕೆ ಬೈಕ್ ಮೇಲೆ ತೆರಳುತ್ತಿದ್ದಾಗ ಈ ಅನಾಹುತ ಸಂಭವಿಸಿದೆ. ಗಾಯಾಳುಗಳನ್ನ ಸುರಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕಲಬುರ್ಗಿಗೆ ಕಳುಹಿಸಿ ಕೊಡಲಾಗಿದೆ. ಘಟನೆ ಸಂಬಂಧ ಸುರಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.