ಪ್ರಜಾಸ್ತ್ರ ಸುದ್ದಿ
ದಾವಣಗೆರೆ: ಮಹಾನಗರ ಪಾಲಿಕೆ ಮೇಯರ್ ಎಸ್.ಟಿ ವೀರೇಶ್ ಹಾಗೂ ದವಾಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದೇವರಮನಿ ಶಿವಕುಮಾರ್ ಪ್ರಯಾಣಿಸುತ್ತಿದ್ದ ಕಾರಿಗೆ ಬೈಕ್ ವೊಂದು ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ನಗರದ ರಿಂಗ್ ರಸ್ತೆಯ ಬಳಿ ಈ ಘಟನೆ ಸಂಭವಿಸಿದೆ. ಬೈಕ್ ಸವಾರ ಹೆಲ್ಮೆಟ್ ಹಾಕಿದ್ದರಿಂದ ಯಾವುದೇ ಪ್ರಾಣಾಪಾಯವಾಗಿಲ್ಲ. ಸಣ್ಣಪುಟ್ಟ ಗಾಯಗಳಾಗಿವೆ. ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಕಿತ್ತೂರು ರಾಣಿ ಚನ್ನಪ್ಪ ಜಯಂತಿ ಮುಗಿಸಿಕೊಂಡು ಬರುತ್ತಿರುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ.