ಪ್ರಜಾಸ್ತ್ರ ಸುದ್ದಿ
ರಾಯಚೂರು: ಕ್ರೂಸರ್ ಹಾಗೂ ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಪಟ್ಟಣದ ಹೊರವಲಯದ ರಾಯಚೂರು ಬೆಳಗಾವಿ ಹೆದ್ದಾರಿ ಬಳಿ ಈ ಘಟನೆ ನಡೆದಿದೆ.
ಈ ಒಂದು ಅಪಘಾತದಲ್ಲಿ ಬೈಕ್ ಸವಾರರಾಗಿದ್ದ ಪಾಮನಕಲ್ಲೂರಿ ಗ್ರಾಮದ ಶಿವರಾಜ ನಾಯಕ ಹಾಗೂ ಮಹೇಶ ಅನ್ನೋ ಇಬ್ಬರು ಸಾವನ್ನಪ್ಪಿದ್ದಾರೆ. ಈ ಕುರಿತು ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿವೆ.