ಬಿಫೋರ್ ಜಾಯ್ ಚಂಡಮಾರುತ: ಸಂತ್ರಸ್ತರಿಗೆ ಪರಿಹಾರ ಘೋಷಣೆ

198

ಪ್ರಜಾಸ್ತ್ರ ಸುದ್ದಿ

ಗಾಂಧಿನಗರ: ಬಿಫೋರ್ ಜಾಯ್ ಚಂಡಮಾರುತಿದಂದಾಗಿ ಗುಜರಾತ್, ಪಶ್ಚಿಮ ಬಂಗಾಳ ಸೇರಿ ಅನೇಕ ಕಡೆ ಸಾಕಷ್ಟು ಹಾನಿ ಮಾಡಿದೆ. ಗುಜರಾತಿನ ಬನಸ್ಕಂಥ್ ಹಾಗೂ ಕಚ್ ಜಿಲ್ಲೆಯಲ್ಲಿ ಭಾರೀ ಅನಾಹುತ ಸೃಷ್ಟಿಯಾಗಿದೆ. ಹೀಗಾಗಿ ರಾಜ್ಯ ಸರ್ಕಾರ ಪರಿಹಾರ ಘೋಷಿಸಿದೆ.

ಈ ಜಿಲ್ಲೆಗಳಲ್ಲಿ ಬರೋಬ್ಬರಿ 1.30 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ನಾಶವಾಗಿದೆ. ಲಕ್ಷಾಂತರ ಜನರ ಬದುಕು ಬೀದಿಗೆ ಬಂದಿದೆ. ರೈತರು ಪರಿಹಾರ ಪಡೆಯಲು ತಾಲೂಕು ಅಭಿವೃದ್ಧಿ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಬೇಕಿದೆ. ಇದಕ್ಕಾಗಿ 240 ಕೋಟಿ ರೂಪಾಯಿ ಪರಿಹಾರ ಘೋಷಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!