ಬೆಂಗಳೂರು: ಕೆಲ ದಿನಗಳ ಹಿಂದೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಇಂದು ಬಿಸಿಯೂಟ ಕಾರ್ಯಕರ್ತೆಯರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ನಗರದ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸ್ತಿದ್ದು, 2 ದಿನಗಳ ಅಹೋರಾತ್ರಿ ಪ್ರತಿಭಟನೆಗೆ ಮುಂದಾಗಿದ್ದಾರೆ.
ಉದ್ಯೋಗ ಭದ್ರತೆ, ಹೊರ ಗುತ್ತಿಗೆ, ನೂತನ ಕಾರ್ಮಿಕ ನೀತಿ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯುಸಿ ನೇತೃತ್ವದಲ್ಲಿ ಪ್ರತಿಭಟನಾ ರ್ಯಾಲಿ ಶುರು ಮಾಡಿದ್ದಾರೆ. ತಮ್ಗೆ ನೀಡಬೇಕಾದ ಸೌಲಭ್ಯಗಳನ್ನ ಖಾಸಗಿ ಅವರಿಗೆ ನೀಡಬಾರದು. ಕಾರ್ಮಿಕ ಕಾಯ್ದೆ ವ್ಯಾಪ್ತಿಗೆ ತಮ್ಮನ್ನ ಸೇರಿಸಬೇಕು ಅಂತಾ ಒತ್ತಾಯಿಸಿದ್ದಾರೆ.