ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸರ್ಕಾರಿ ಶಾಲೆಯ ಬಿಸಿಯೂಟ ಕಾರ್ಯಕರ್ತೆಯರು ಸಿಲಿಕಾನ್ ಸಿಟಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಯಾಕಂದರೆ 60 ವರ್ಷ ಮೇಲ್ಪಟ್ಟ 6,500ಕ್ಕೂ ಹೆಚ್ಚು ಕಾರ್ಯಕರ್ತೆಯರನ್ನು ಕೆಲಸದಿಂದ ವಜಾ ಮಾಡಿದ್ದಾರೆ. ಇದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.
ರಾಜ್ಯದ ಸರ್ಕಾರಿ ಶಾಲೆಯಲ್ಲಿ ಸುಮಾರು 50 ಲಕ್ಷ ವಿದ್ಯಾರ್ಥಿಗಳು ಓದುತ್ತಿದ್ದಾರೆ. ಅವರಿಗೆ ಊಟ ಮಾಡಿ ಹಾಕುವ ಕಾರ್ಯಕರ್ತೆಯರು ಇಂದಿಗೂ ಕನಿಷ್ಠ ವೇತನಕ್ಕೆ ಕೆಲಸ ಮಾಡುತ್ತಿದ್ದಾರೆ. ಸುಪ್ರೀಂ ಕೋರ್ಟಿನ ತೀರ್ಪಿನ ಆಧಾರದ ಮೇಲೆ ಕಾರ್ಯಕರ್ತೆಯರನ್ನು ವಜಾ ಮಾಡಲಾಗಿದೆ. ಅವರಿಗೂ ಗ್ರಾಚ್ಯುಟಿ ಜಾರಿ ಮಾಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.
ಬಿಸಿಯೂಟ ಕಾರ್ಯಕರ್ತೆಯರು ಅನಿರ್ಧಿಷ್ಟವಾಗಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಇದರಿಂದಾಗಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದ ಸಮಸ್ಯೆಯಾಗಲಿದೆ. ನಮ್ಮ ಬೇಡಿಕೆ ಈಡೇರುವ ತನಕ ಪ್ರತಿಭಟನೆಯಿಂದ ಹಿಂದಕ್ಕೆ ಸರಿಯಲ್ಲ ಎಂದು ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಅಧ್ಯಕ್ಷೆ ಲಕ್ಷ್ಮಿದೇವಿ ಹೇಳಿದ್ದಾರೆ.