ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮಾಜಿ ಸಚಿವ ಬಿ.ಜೆ ಪುಟ್ಟಸ್ವಾಮಿ ಸನ್ಯಾಸತ್ವ ಸ್ವೀಕರಿಸಿದ್ದು, ಮೇ 15ರಂದು ತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠದ ಮೊದಲ ಪೀಠಾಧಿಪತಿಯಾಗಲಿದ್ದರು. ಇದಕ್ಕೆ ಕೋರ್ಟ್ ತಡೆಯಾಜ್ಞೆ ನೀಡಿದೆ. ಪಟ್ಟಾಭಿಷೇಕಕ್ಕೆ ಗ್ರಾಮಾಂತರ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.
ರಂಗಸ್ವಾಮಿ, ಎಂ.ಪಿ ಹೇಮಾವತಿ, ಎನ್.ರಾಜು, ಟಿ.ಎಂ.ಸಿ ಯತೀಶ್ ಕುಮಾರ್ ಹಾಗೂ ಗೋವಿಂದರಾಜು ಎಂಬುವರು, ಪುಟ್ಟಸ್ವಾಮಿ ಪೀಠಾರೋಹಣ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದಾರೆ. ಇದರ ವಿಚಾರಣೆ ನಡೆಸಿದ ಕೋರ್ಟ್ ತಡೆಯಾಜ್ಞೆ ನೀಡಿದೆ. ವಿಶ್ವ ಗಾಣಿಗ ಸಮುದಾಯದ ಟ್ರಸ್ಟ್ ರಚನೆಯೇ ಕಾನೂನು ಬಾಹಿರವಾಗಿದೆ. ಟ್ರಸ್ಟ್ ಚಟುವಟಿಕೆಯಲ್ಲಿ ಯಥಾಸ್ಥಿತಿ ಕಾಯ್ದುಕೊಂಡು ಹೋಗಲು ಹೇಳಿದೆ ಎಂದು ಅರ್ಜಿದಾರ ಪರ ವಕೀಲರು ಹೇಳಿದ್ದಾರೆ.