ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ: ಸಿಎಂ ಬೊಮ್ಮಾಯಿ

139

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ನಮ್ಮ ಕೆಲಸ, ಆಡಳಿತವನ್ನು ನೋಡಿದ ಜನರು ಅದರ ಆಧಾರದ ಮೇಲೆ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. ವೈಯ್ಯಾಲಿಕಾವಲ್ ನಲ್ಲಿರುವ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ವೇಳೆ ಮಾತನಾಡಿದರು.

ರಾಜ್ಯದಲ್ಲಿ ಅಭಿವೃದ್ಧಿಯಾಗುವಂತೆ ದೇವರಲ್ಲಿ ಬೇಡಿಕೊಂಡಿದ್ದೇನೆ. ಖಂಡಿತವಾಗಿ 2023ರಲ್ಲಿ ವೆಂಕೇಶ್ವರನ ಆಶೀರ್ವಾದ ಇರಲಿದೆ ಎಂದರು. ಇನ್ನು ಉದ್ಯಮಿ ಪ್ರದೀಪ್ ಬಿಜೆಪಿ ಶಾಸಕ ಲಿಂಬಾವಳಿ ಅವರ ಹೆಸರು ಬರದಿಟ್ಟು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ಬಗ್ಗೆ ಮಾತನಾಡಿ, ಪ್ರಕ್ರಿಯೆ ಏನಾಗಬೇಕೋ ಆಗಿದೆ. ಮುಂದೆಯೂ ಕಾನೂನು ಪ್ರಕಾರ ನಡೆಯಲಿದೆ ಅಂತಾ ಹೇಳಿದರು.




Leave a Reply

Your email address will not be published. Required fields are marked *

error: Content is protected !!