ಬಿಜೆಪಿ-ಜೆಡಿಎಸ್ ದೋಸ್ತಿಗೆ ಈಶ್ವರಪ್ಪ ಶಾಕ್

114

ಪ್ರಜಾಸ್ತ್ರ ಸುದ್ದಿ

ಮೈಸೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡು ಹೋಗಬೇಕು ಎಂದು ಒಂದಾಗಿವೆ. ಆದರೆ, ಆರಂಭದಲ್ಲಿ ವಿಘ್ನ ಎಂಬಂತೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ನೀಡಿದ ಹೇಳಿಕೆ ಶಾಕ್ ನೀಡಿದೆ.

ಹೌದು, ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಗೆ ನಾವು ಬೆಂಬಲಿಸುವುದಿಲ್ಲ. ಅಲ್ಲಿ ನಾವು ಒಮ್ಮೆಯೂ ಗೆದ್ದಿಲ್ಲ. ಬಿಜೆಪಿಯಿಂದ 12 ಜನ ಆಕಾಂಕ್ಷಿಗಳಿದ್ದಾರೆ. ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಯಾರೇ ಅಭ್ಯರ್ಥಿಯಾದರೂ ಗೆಲುವಿಗೆ ಶ್ರಮಿಸುತ್ತೇವೆ. ಲೋಕಸಭಾ ಚುನಾವಣೆಯಲ್ಲಿ ಮಾತ್ರ ಜೆಡಿಎಸ್ ನೊಂದಿಗೆ ಮೈತ್ರಿ ಅಂತಾ ಹೇಳಿದರು.




Leave a Reply

Your email address will not be published. Required fields are marked *

error: Content is protected !!