ಹಾಲಿ, ಮಾಜಿ ಶಾಸಕರು ಕಾಂಗ್ರೆಸ್ಸಿಗೆ: ಸಚಿವ ಚಲುವರಾಯಸ್ವಾಮಿ

293

ಪ್ರಜಾಸ್ತ್ರ ಸುದ್ದಿ

ಮೈಸೂರು: ರಾಜ್ಯದಲ್ಲಿ ಆಪರೇಷನ್ ಹಸ್ತ ನಡೆಯುತ್ತಿದೆ ಅನ್ನೋ ಮಾತಿಗೆ ಸಾಕ್ಷಿ ಎಂಬಂತೆ ಸಚಿವ ಚಲುವರಾಯಸ್ವಾಮಿ ಆಡಿದ ಮಾತುಗಳು ಚರ್ಚೆಗೆ ಕಾರಣವಾಗಿದೆ. ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, 10-15 ಹಾಲಿ, ಮಾಜಿ ಶಾಸಕರು ಕಾಂಗ್ರೆಸ್ಸಿಗೆ ಬರಲಿದ್ದಾರೆ ಎಂದರು.

ಬಿಜೆಪಿ, ಜೆಡಿಎಸ್ ಪಕ್ಷದವರು ಕಾಂಗ್ರೆಸ್ಸಿಗೆ ಬರುವುದು ಖಚಿತ. ಯಾರೆಲ್ಲ ಬರುತ್ತಾರೆ ಅನ್ನೋದು ಈಗಲೇ ಹೇಳಲು ಸಾಧ್ಯವಿಲ್ಲ. ಇನ್ನು ಕೆಲವು ದಿನಗಳಲ್ಲಿ ಎಲ್ಲವೂ ಅಂತಿಮವಾಗುತ್ತೆ ಎಂದಿದ್ದಾರೆ. ಸಚಿವರ ಈ ಮಾತು ರಾಜ್ಯ ರಾಜಕೀಯದಲ್ಲಿ ಮತ್ತೊಂದು ಹೊಸ ಅಲೆ ಸೃಷ್ಟಿಸಲಿದೆ.




Leave a Reply

Your email address will not be published. Required fields are marked *

error: Content is protected !!