ಜೆಡಿಎಸ್ ನವರಿಗೂ ಸಮಾಧಾನವಾಗುವಂತೆ ತೀರ್ಮಾನ: ವಿಜಯೇಂದ್ರ

110

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಆದರೆ, ಈಗ ಸೀಟು ಹಂಚಿಕೆ ವಿಚಾರದಲ್ಲಿ ಜೆಡಿಎಸ್ ನಾಯಕರಿಗೆ ಅಸಮಾಧಾನ ಮೂಡಿದೆ. ಕೇವಲ 2 ಸೀಟಿಗಾಗಿ ಹೊಂದಾಣಿಕೆ ಮಾಡಿಕೊಳ್ಳಬೇಕಿತ್ತಾ ಎನ್ನುವ ಪ್ರಶ್ನೆ ಎದುರಾಗಿದೆ. ಹೀಗಾಗಿ ಬಹಿರಂಗವಾಗಿ ಅಸಮಾಧಾನ ಹೊರ ಹಾಕುತ್ತಿದ್ದಾರೆ.

ಈ ಕುರಿತು ಇಂದು ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಜೆಡಿಎಸ್ ನವರಿಗೂ ಸಮಾಧಾನವಾಗುವಂತೆ ನಮ್ಮ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತೆ. ಏನೇ ಸಣ್ಣಪುಟ್ಟ ಸಮಸ್ಯೆಗಳಿದ್ದರೂ ಸುಖಾಂತ್ಯ ಕಾಣುತ್ತೆ ಎಂದಿದ್ದಾರೆ.

ರಾಷ್ಟ್ರೀಯ ನಾಯಕರ ಜೊತೆಗೆ ಚರ್ಚಿಸಿದ್ದೇನೆ. ದೇವೇಗೌಡರೊಂದಿಗೆ ನಿನ್ನೆ ಮಾತನಾಡಿದ್ದೇನೆ. ಇಂದು ಮುಂಜಾನೆ ಕುಮಾರಸ್ವಾಮಿಯವರೊಂದಿಗೆ ಮಾತನಾಡಿದ್ದೇನೆ. ಎಲ್ಲ ವಿಷಯಗಳ ಕುರಿತು ಎರಡು ಪಕ್ಷಗಳ ವರಿಷ್ಠರು ಚರ್ಚೆ ಮಾಡಿದ್ದಾರೆ ಅಂತಾ ಹೇಳಿದರು.




Leave a Reply

Your email address will not be published. Required fields are marked *

error: Content is protected !!