ಕಾರಜೋಳ, ನಿಖಿಲ್ ಕುಮಾರಸ್ವಾಮಿ ಸೋಲು

98

ಪ್ರಜಾಸ್ತ್ರ ಸುದ್ದಿ

ಬಾಗಲಕೋಟೆ: ಜಿಲ್ಲೆಯ ಮುಧೋಳ ವಿಧಾನಸಭಾ ಕ್ಷೇತ್ರದಲ್ಲಿ ಸಚಿವ ಗೋವಿಂದ ಕಾರಜೋಳ ಸೋಲು ಕಾಣುವ ಮೂಲಕ ಭಾರೀ ಮುಖಭಂಗ ಅನುಭವಿಸಿದ್ದಾರೆ. ಕಾಂಗ್ರೆಸ್ ನ ಆರ್.ಬಿ ತಿಮ್ಮಾಪುರ ವಿರುದ್ಧ ಸೋಲು ಕಂಡಿದ್ದಾರೆ.

ಇನ್ನು ರಾಮನರಗದಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲು ಕಂಡಿದ್ದಾರೆ. ಕಾಂಗ್ರೆಸ್ ನ ಇಕ್ಬಾಲ್ ಹುಸೇನ್ ವಿರುದ್ಧ ಸೋಲು ಕಂಡಿದ್ದಾರೆ. ಮಗನಿಗಾಗಿ ತಾಯಿ ಅನಿತಾ ಕುಮಾರಸ್ವಾಮಿ ತಮ್ಮ ಕ್ಷೇತ್ರ ಬಿಟ್ಟು ಕೊಟ್ಟಿದ್ದರು. ಆದರೆ, ಮತದಾರ ಪ್ರಭುದೇವ ಜೆಡಿಎಸ್ ನಾಯಕರ ಲೆಕ್ಕಾಚಾರ ಉಲ್ಟಾ ಮಾಡಿದ್ದಾರೆ.

ಕಳೆದ ಬಾರಿ ನಡೆದ ಲೋಕಸಭೆಯ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಿದ್ದ ನಿಖಿಲ್ ಕುಮಾರಸ್ವಾಮಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ವಿರುದ್ಧ ಸೋಲು ಕಂಡಿದ್ದರು.




Leave a Reply

Your email address will not be published. Required fields are marked *

error: Content is protected !!