ಪ್ರಜಾಸ್ತ್ರ ಸುದ್ದಿ
ಶಿವಮೊಗ್ಗ: ಕರ್ನಾಟಕ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದೆ. ಕಾಂಗ್ರೆಸ್, ಜೆಡಿಎಸ್ ಈಗಾಗ್ಲೇ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಬಿಜೆಪಿ ಇದುವರೆಗೂ ಅಭ್ಯರ್ಥಿಗಳನ್ನು ಘೋಷಿಸಿಲ್ಲ. ಹೀಗಾಗಿ ಕಮಲ ನಾಯಕರಲ್ಲಿ ಸಾಕಷ್ಟು ಟೆನ್ಷನ್ ಮೂಡಿಸಿದೆ. ಈ ಕುರಿತು ಮಾತನಾಡಿರುವ ಮಾಜಿ ಸಿಎಂ ಯಡಿಯೂರಪ್ಪ, ಇನ್ನೆರಡು ದಿನಗಳಲ್ಲಿ ಮೊದಲ ಪಟ್ಟಿ ಬಿಡುಗಡೆ ಎಂದಿದ್ದಾರೆ.
ಈಗಾಗ್ಲೇ ಎರಡು ದಿನಗಳ ಕಾಲ ಕೋರ್ ಕಮಿಟಿ ಸಭೆ ನಡೆದಿದೆ. ಬೆಳಗಾವಿ ಜಿಲ್ಲೆಯ ಟಿಕೆಟ್ ಗೊಂದಲಕ್ಕೆ ತೆರೆ ಬೀಳಲಿದೆ. ಕಾರ್ಯಕರ್ತರ ನಿರೀಕ್ಷೆಯಂತೆ ವಿಜಯೇಂದ್ರ ಶಿಕಾರಿಪುರ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂದು ಹೇಳುವ ಮೂಲಕ, ಪುತ್ರನ ಟಿಕೆಟ್ ಕನ್ಫರ್ಮ್ ಎಂದು ಪರೋಕ್ಷವಾಗಿ ಹೇಳಿದ್ದಾರೆ.