ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಟಿಕೆಟ್ ಯಾರಿಗೆ ಕೊಡಬೇಕು. ಯಾರಿಗೆ ಬಿಡಬೇಕು ಅನ್ನೋದು ನಮಗೆ ಗೊತ್ತಿದೆ. ನಮ್ಮ ಕಡೆಯವರಿಗೆ ಟಿಕೆಟ್ ಕೊಡಬೇಕು ಎಂದು ಸೆರಗು, ಪಂಚೆ ಹಿಡಿದುಕೊಂಡು ಬರಬೇಡಿ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಹೇಳಿದ್ದಾರೆ.
ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆ ಸಂಬಂಧ ಬಿಜೆಪಿ ಮುಖಂಡರೊಂದಿಗೆ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಜನರೊಂದಿಗೆ ಬೆರೆತು ಕೆಲಸ ಮಾಡುವವರಿಗೆ ಟಿಕೆಟ್ ನೀಡಲಾಗುತ್ತೆ. ಸುಮ್ನೆ ಬೆಂಗಳೂರಿಗೆ ಬರುವುದು ಬೇಡ ಎಂದರು.