ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಚುನಾವಣೆಗಳು ಹತ್ತಿರ ಬರುತ್ತಿದ್ದಂತೆ ರಾಜಕೀಯ ಕೆಸರೆರಚಾಟ ಜೋರಾಗುತ್ತಿವೆ. ಈ ವರ್ಷಾಂತ್ಯಕ್ಕೆ ಪಂಚ ರಾಜ್ಯಗಳ ಚುನಾವಣೆ ಜೊತೆಗೆ ಮುಂದಿನ ವರ್ಷ ಲೋಕಸಭಾ ಚುನಾವಣೆ ನಡೆಯಲಿದೆ. ಹೀಗಾಗಿ ರಾಜಕೀಯ ಪಕ್ಷಗಳ ಜಟಾಪಟಿ ಜೋರಾಗಿದೆ. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯನ್ನು ರಾವಣನಿಗೆ ಹೋಲಿಸಿ ಬಿಜೆಪಿ ಮಾಡಿದ ಪೋಸ್ಟ್ ಗೆ ಸಹ ತಿರುಗೇಟು ನೀಡಿದೆ.
ರಾಕ್ಷಸರ ರಾಜ ರಾವಣನ ನವಯುಗದ ಅವತಾರ ಎಂದು ಬರೆದ ಎಡಿಟ್ ಮಾಡಿದ ರಾಹುಲ್ ಗಾಂಧಿ ಫೋಟೋವನ್ನು ಬಿಜೆಪಿ ಹಂಚಿಕೊಂಡಿದೆ. ಇದಕ್ಕೆ ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿದೆ. ರಾಹುಲ್ ಗಾಂಧಿ ಹತ್ಯೆಯನ್ನು ಬಿಜೆಪಿ ಬಯಸುತ್ತಿದೆ ಎಂದು ಕಿಡಿ ಕಾರಿದೆ.
ಇದೀಗ ಕಾಂಗ್ರೆಸ್ ಕಡೆಯಿಂದಲೂ ಪೋಸ್ಟರ್ ಬಿಡುಗಡೆಯಾಗಿದೆ. ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಇರುವ ಫೋಟೋದೊಂದಿಗೆ ಜುಮ್ಲಾ ಬಾಯ್(ಸುಳ್ಳುಗಾರ) ಎಂದು ಬರೆದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿದೆ. ಈ ಮೂಲಕ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಪೋಸ್ಟರ್ ಕಾಳಗ ನಡೆದಿದೆ.