ಪ್ರಜಾಸ್ತ್ರ ಸುದ್ದಿ
ವಿಜಯಪುರ: ರಾಜ್ಯದಲ್ಲಿ ಇಂದಿನಿಂದ ಬಿಜೆಪಿ ಬರ ಅಧ್ಯಯನ ನಡೆಸಿದೆ. ಇದರ ಭಾಗವಾಗಿ ಶನಿವಾರ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದ ಬರ ಅಧ್ಯಯನ ತಂಡ ಜಿಲ್ಲೆಗೆ ಭೇಟಿ ನೀಡಿದೆ.
ಜಿಲ್ಲೆಯ ತಿಕೋಟ ತಾಲೂಕಿನ ಜಾಲಗೇರಿ ಗ್ರಾಮದಲ್ಲಿನ ಹೊಲಗಳಿಗೆ ಭೇಟಿ ನೀಡಿ ಬೆಳೆ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಕಟೀಲ್, ರಾಜ್ಯಾದ್ಯಂತ ಬಿಜೆಪಿ ಬರ ಅಧ್ಯಯನ ನಡೆಸಲಿದೆ. ನಂತರ ವರದಿಯನ್ನು ಕೇಂದ್ರಕ್ಕೆ ಕಳಿಸಿ ಪರಿಹಾರ ಕೇಳುತ್ತೇವೆ. ರೈತರಿಗೆ ಸರ್ಕಾರ ಸಂಪರ್ಕವಾಗಿ ವಿದ್ಯುತ್ ನೀಡಿದರೆ ಉಳಿದಿರುವ ಬೆಳೆ ಉಳಿಸಿಕೊಳ್ಳುತ್ತಿದ್ದರು ಎಂದು ಹೇಳಿದರು.
ಈ ವೇಳೆ ರೈತರು ಬಿಜೆಪಿ ನಾಯಕರ ಬಳಿ ತಮ್ಮ ಅಳಲು ತೋಡಿಕೊಂಡರು. ಸರ್ಕಾರದಿಂದ ನಮಗೆ ಸ್ಪಂದನೆ ಸಿಗುತ್ತಿಲ್ಲ. ಪರಿಹಾರ ಒದಗಿಸಿಕೊಡಿ ಎಂದು ಮನವಿ ಮಾಡಿದರು. ಈ ವೇಳೆ ಸಂಸದ ರಮೇಶ ಜಿಗಜಿಣಗಿ, ಜಿಲ್ಲಾಧ್ಯಕ್ಷ ಆರ್.ಎಸ್ ಪಾಟೀಲ ಕೂಚಬಾಳ, ಉಪಾಧ್ಯಕ್ಷ ಉಮೇಶ ಕಾರಜೋಳ, ಶಾಸಕ ಸಿದ್ದು ಸವದಿ ಸೇರಿದಂತೆ ಸಿಂದಗಿ, ದೇವರ ಹಿಪ್ಪರಗಿಯ ಮಾಜಿ ಶಾಸಕರು ಹಾಜರಿದ್ದರು.