ಪ್ರಜಾಸ್ತ್ರ ಸುದ್ದಿ
ಬಳ್ಳಾರಿ: ಬಿಜೆಪಿ ಜಿಲ್ಲಾ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಾಜಿ ಸಚಿವ ಸಿ.ಟಿ ರವಿ, ಕಾಂಗ್ರೆಸ್ ರಾಜ್ಯದಲ್ಲಿ ಅಲ್ಲ, ಇಡೀ ದೇಶದಲ್ಲೇ 20 ಸ್ಥಾನ ಗೆಲ್ಲಲ್ಲ ಎಂದು ಹೇಳಿದರು.
ಕಳೆದ ಬಾರಿ ಕರ್ನಾಟಕ, ಕೇರಳ, ತಮಿಳುನಾಡಿನಲ್ಲಿ ಬೋನಸ್ ಎನ್ನುವ ರೀತಿಯಲ್ಲಿ ಒಂದೆರಡು ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿತ್ತು. ಈ ಬಾರಿ ಅದು ಸಹ ಆಗುವುದಿಲ್ಲ. ಎಲ್ಲವನ್ನೂ ನಾವೇ ಗೆಲ್ಲುತ್ತೇವೆ. ರಾಮ ಮಂದಿರ ನಿರ್ಮಾಣದ ಬಳಿಕ ಸರ್ವಂ ರಾಮಮಯಂ ಆಗಿದೆ. ದೇಶದಲ್ಲಿ 400 ಸ್ಥಾನ ಗೆಲ್ಲುತ್ತೇವೆ ಎಂದರು.