ಪ್ರಜಾಸ್ತ್ರ ಸುದ್ದಿ
ದಾವಣಗೆರೆ: ಸ್ವಪಕ್ಷೀಯ ನಾಯಕರ ವಿರುದ್ಧ ಸತತವಾಗಿ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ, ಇಂದು ಸಹ ತಮ್ಮ ವಾಗ್ದಾಳಿ ಮುಂದುವರೆಸಿದರು. ಬಿಜೆಪಿಯ ಕೆಲವರ ದುರಹಂಕಾರಕ್ಕೆ ಜನರು ಬೇಸತ್ತಿದ್ದಾರೆ. ಮುಖಂಡರೆ ಪಕ್ಷದಲ್ಲಿ ಮಾತನಾಡಲು ಭಯ ಪಡುತ್ತಿದ್ದಾರೆ ಎಂದು ಆಕ್ರೋಶ ಹೊರ ಹಾಕಿದರು.
ನಾನು ಎಲ್ಲಿಯೂ ಕಾಂಗ್ರೆಸ್ ಸೇರುತ್ತೇನೆ ಎಂದಿಲ್ಲ. ಕೆಲವರು ಹೇಳುತ್ತಿದ್ದಾರೆ. ನಮ್ಮನ್ನು ಕರೆದು ಮಾತನಾಡಿಸಿಲ್ಲ, ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎನ್ನುವ ಬೇಸರವಿದೆ. ಆದರೆ, ಪಕ್ಷ ಬಿಡುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ. ವಿನಾಕಾರಣ ನನ್ನ ವಿರುದ್ಧ ಅಪಪ್ರಚಾರ ನಡೆಸಲಾಗುತ್ತಿದೆ ಅಂತಾ ಹೇಳಿದರು.