ಪ್ರಜಾಸ್ತ್ರ ಸುದ್ದಿ
ಚಿತ್ರದುರ್ಗ: ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರುವುದು ಪಕ್ಕಾ ಆಗಿದೆ. ಕಳೆದ ಕೆಲ ದಿನಗಳಿಂದ ಪೂರ್ಣಿಮಾ ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎನ್ನಲಾಗಿತ್ತು. ಇದಕ್ಕೆ ಅವರೇ ಸ್ಪಷ್ಟನೆ ನೀಡಿದ್ದು, ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಕಾಂಗ್ರೆಸ್ ಸೇರುತ್ತಿದ್ದೇನೆ ಎಂದಿದ್ದಾರೆ.
ಪಕ್ಷದಲ್ಲಿ ಹಿಂದೆ ನಿಮ್ಮ ತಂದೆಗೆ ಅನ್ಯಾಯವಾಗಿದೆ. ಅದನ್ನು ಸರಿಪಡಿಸಿಕೊಳ್ಳಬೇಕು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳುವ ಮೂಲಕ ಆಹ್ವಾನ ನೀಡಿದ್ದಾರೆ. ಈ ಹಿಂದಿನ ಬಿಜೆಪಿ ಸಮುದಾಯಕ್ಕೆ ನೀಡಿದ್ದ ಭರವಸೆ ಉಳಿಸಿಕೊಂಡಿಲ್ಲ.
ಪತಿಗೆ ಪರಿಷತ್ ಟಿಕೆಟ್ ನೀಡುತ್ತಾರೆ ಎಂದು ನಾನು ಹೋಗುತ್ತಿಲ್ಲ. ಟಿಕೆಟ್ ಕೇಳುವುದು ಅವರ ಹಕ್ಕು. ಮುಖಂಡರೊಂದಿಗೆ ಚರ್ಚಿಸಿ ಶೀಘ್ರದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗುವ ಮೂಲಕ ಮರಳಿ ಬರುತ್ತಿದ್ದೇನೆ ಎಂದಿದ್ದಾರೆ.