ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಬಿಜೆಪಿ ಮಾಜಿ ಶಾಸಕರು ಒಬ್ಬೊಬ್ಬರಾಗಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ. ಈ ಮೂಲಕ ಲೋಕಸಭಾ ಚುನಾವಣೆ ಹೊತ್ತಿನಲ್ಲಿ ಕಮಲ ನಾಯಕರಿಗೆ ಶಾಕ್ ನೀಡುತ್ತಿದ್ದಾರೆ. ಇಂದು ಬಿಜೆಪಿ ಮಾಜಿ ಶಾಸಕ ರಾಮಣ್ಣ ಲಮಾಣಿ ಕಾಂಗ್ರೆಸ್ ಸೇರ್ಪಡೆಯಾದರು.
ನಗರದ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ರಾಮಣ್ಣ ಲಮಾಣಿ ಕಾಂಗ್ರೆಸ್ ಗೆ ಬಂದರು. ಈ ವೇಳೆ ಮಾತನಾಡಿದ ಡಿಕೆಶಿ ನನ್ನ ಮುಂದೆ 42 ಮುಖಂಡರು ಪಟ್ಟಿ ಇದೆ. ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ ಅವರು ಕಾಂಗ್ರೆಸ್ ಸೇರ್ಪಡೆಯಾಗುವವರ ಪಟ್ಟಿ ಕೊಟ್ಟಿದ್ದಾರೆ. ಆ ಹೆಸರುಗಳನ್ನು ಸಧ್ಯ ಬಹಿರಂಗಗೊಳಿಸುವುದಿಲ್ಲ ಎಂದರು.
ಪಕ್ಷ ಸೇರ್ಪಡೆಯಾದ ಬಳಿಕ ಮಾತನಾಡಿದ ರಾಮಣ್ಣ ಲಮಾಣಿ, ಯಾವುದೇ ಷರತ್ತುಗಳಿಲ್ಲದೆ ಸೇರ್ಪಡೆಯಾಗಿದ್ದಾನೆ. ಬಿಜೆಪಿಯಲ್ಲಿ ನನಗಾದ ಅನ್ಯಾಯದಿಂದ ಹೊರ ಬಂದಿದ್ದೇನೆ. ಕಾಂಗ್ರೆಸ್ ಯಾರನ್ನು ಅಭ್ಯರ್ಥಿ ಮಾಡುತ್ತದೆಯೋ ಅವರ ಗೆಲುವಿಗೆ ಶ್ರಮಿಸುತ್ತೇನೆ ಎಂದರು.
ಈ ವೇಳೆ ಸಚಿವರಾದ ಎಂ.ಬಿ ಪಾಟೀಲ, ಹೆಚ್.ಕೆ ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಶಾಸಕರಾದ ಲಕ್ಷ್ಮಣ ಸವದಿ, ವಿನಯ್ ಕುಲಕರ್ಣಿ, ಎಂಎಲ್ ಸಿ ಜಗದೀಶ್ ಶೆಟ್ಟರ್ ಸೇರಿ ಅನೇಕರು ಉಪಸ್ಥಿತರಿದ್ದರು.