ಬಿಜೆಪಿ ಮಾಜಿ ಶಾಸಕ ನಿಧನ

250

ಪ್ರಜಾಸ್ತ್ರ ಸುದ್ದಿ

ಕಲಬುರಗಿ: ಬಿಜೆಪಿ ಮಾಜಿ ಶಾಸಕ ವಾಲ್ಮೀಕಿ ನಾಯಕ ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. 72 ವರ್ಷದ ವಾಲ್ಮೀಕಿ ನಾಯಕ ಚಿತ್ತಾಪುರದ ಮೀಸಲು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡ್ತಿದ್ದರು. ಶನಿವಾರ ಮಧ್ಯಾಹ್ನ ವಾಡಿ ಪಟ್ಟಣದಲ್ಲಿ ಮೃತರ ಅಂತ್ಯಕ್ರಿಯೆ ನಡೆಯಲಿದೆ. ಮೃತ ವಾಲ್ಮೀಕಿ ನಾಯಕ, ಪತ್ನಿ, ಇಬ್ಬರು ಗಂಡ್ಮಕ್ಕಳು, ನಾಲ್ವರು ಹೆಣ್ಮಕ್ಕಳನ್ನು ಅಗಲಿದ್ದಾರೆ.

ಪಟ್ಟಣ ಪಂಚಾಯ್ತಿಯಿಂದ ರಾಜಕೀಯ ಶುರು ಮಾಡಿದ ಇವರು, 1999ರಲ್ಲಿ ಶಹಾಬಾದ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು. ಮೂರು ಬಾರಿ ಚಿತ್ತಾಪುರ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಖರ್ಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನಡೆದ ಉಪ ಚುನಾವಣೆಯಲ್ಲಿ ಪ್ರಿಯಾಂಕ್ ಖರ್ಗೆ ವಿರುದ್ಧ ಗೆಲುವು ದಾಖಲಿಸಿದ್ದರು.




Leave a Reply

Your email address will not be published. Required fields are marked *

error: Content is protected !!