ಹೈಕಮಾಂಡ್ ಸೂಚನೆನಾ? ಮಗನಿಗಾಗಿ ಈಶ್ವರಪ್ಪ ರಾಜಕೀಯ ನಿವೃತ್ತಿನಾ ?

114

ಪ್ರಜಾಸ್ತ್ರ ಸುದ್ದಿ

ಶಿವಮೊಗ್ಗ: ಬಿಜೆಪಿ‌ ಹಿರಿಯ ನಾಯಕ, ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಈ ಕುರಿತು ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿರುವ ಅವರು, ಸ್ವ ಇಚ್ಛೆಯಿಂದ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸುತ್ತಿದ್ದು, ಯಾವುದೇ ಕ್ಷೇತ್ರಕ್ಕೂ ತಮ್ಮನ್ನು ಪರಿಗಣಿಸಬಾರದು ಎಂದಿದ್ದಾರೆ.

ಇದು ಇದೀಗ ಹೊಸ ಚರ್ಚೆ ಹುಟ್ಟು ಹಾಕಿದೆ. ಬಿಜೆಪಿ‌ ಹೈಕಮಾಂಡ್ ಟಿಕೆಟ್ ನೀಡದಿರುವವರ ಪಟ್ಟಿಯಲ್ಲಿ ಈಶ್ವರಪ್ಪ ಹೆಸರು ಇದೆ ಹೀಗಾಗಿ ಅವರೆ ಹಿಂದೆ ಸರಿದಿದ್ದಾರೆ ಎನ್ನಲಾಗುತ್ತಿದೆ.

ಇನ್ನೊಂದು ಮೂಲದ ಪ್ರಕಾರ ಮಗನಿಗೆ ಟಿಕೆಟ್ ಕೊಡಿಸಲು ಪ್ರಯತ್ನಿಸುತ್ತಿರುವ ನಾಯಕರ ರೇಸಿನಲ್ಲಿ ಈಶ್ವರಪ್ಪ ಸಹ ಇದ್ದು, ತಮ್ಮ ಬದಲು ಮಗ ಕಾಂತೇಶಗೆ ಟಿಕೆಟ್ ಕೊಡಿಸುವ ಸಲುವಾಗಿ ಈ ನಿರ್ಧಾರ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!