ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಬಿಜೆಪಿ ಕಚೇರಿಯಲ್ಲಿ ಬಳ್ಳಾರಿ ವಿಭಾಗದ ಪ್ರಭಾರಿ ಸಿದ್ದೇಶ್ ಯಾದವ್ ಸೋಮವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪಕ್ಷದ ಕಚೇರಿಯಲ್ಲಿ ನಡೆಯುತ್ತಿದ್ದ ಸಭೆಗೆ ಹಾಜರಾಗಿದ್ದರು. ಈ ವೇಳೆ ಹೃದಯಾಘಾತದಿಂದ ನಿಧನಹೊಂದಿದ್ದಾರೆ.
ಸಿದ್ದೇಶ್ ಯಾದವ್ ಈ ಹಿಂದೆ ಚಿತ್ರದುರ್ಗಾ ಜಿಲ್ಲಾಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು. ಈ ಕುರಿತು ಇನ್ನಷ್ಟು ಮಾಹಿತಿ ತಿಳಿದು ಬರಬೇಕಿದೆ.