ಪ್ರಜಾಸ್ತ್ರ ಸುದ್ದಿ
ಮಡಿಕೇರಿ: ಬಿಜೆಪಿ ಎಂದೂ ಕೊಟ್ಟ ಭರವಸೆಗಳನ್ನು ಈಡೇರಿಸಿಲ್ಲ. ಮುಂದೆಯೂ ಈಡೇರಿಸುವುದಿಲ್ಲ. ಕಳೆದ 10 ವರ್ಷಗಳಲ್ಲಿ ಪ್ರಧಾನಿ ಮೋದಿ ಕೊಟ್ಟ ಭರವಸೆಗಳನ್ನೇ ಈಡೇರಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
600 ಭರವಸೆಗಳಲ್ಲಿ 60 ಈಡೇರಿಸಿದ್ದಾರೆ. ಕಪ್ಪು ಹಣ ತರುತ್ತೇನೆ ಅಂದರು ತರಲಿಲ್ಲ. ಪ್ರತಿಯೊಬ್ಬರಿಗೂ 15 ಲಕ್ಷ ರೂಪಾಯಿ ಅಕೌಂಟ್ ಗೆ ಹಾಕ್ತೀನಿ ಅಂದರು, ಹಾಕಲಿಲ್ಲ. ಪ್ರತಿ ವರ್ಷ 2 ಕೋದಿ ಉದ್ಯೋಗ ಸೃಷ್ಟಿಸುತ್ತೇವೆ ಅಂದರು, ಮಾಡಲಿಲ್ಲ. ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಅಂದರು, ಮಾಡಲಿಲ್ಲ. ಅಚ್ಚೆ ದಿನ್ ಬಂತಾ, ಮೇಕ್ ಇನ್ ಇಂಡಿಯಾ ಮಾಡಿದರಾ? ಬರೀ ಪೊಳ್ಳು ಭರವಸೆಗಳು ಅಂತಾ ಕಿಡಿ ಕಾರಿದರು.
ಕಾಂಗ್ರೆಸ್ ಗ್ಯಾರಂಟಿಗಳಿಂದ ಹೆಣ್ಮಕ್ಕಳು ದಾರಿ ತಪ್ಪಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಹೀಗಂದರೆ ಏನರ್ಥ? ಎರಡು ಬಾರಿ ಮುಖ್ಯಮಂತ್ರಿಯಾದವರು. ಹೆಣ್ಮಕ್ಕಳ ಬಗ್ಗೆ ಹೀಗೆಲ್ಲ ಮಾತನಾಡಿದರೆ ಹೇಗೆ? ಇದನ್ನು ಅವರು ಹೇಗೆ ಸಹಿಸಿಕೊಳ್ಳಬೇಕು ಅಂತಾ ಆಕ್ರೋಶ ವ್ಯಕ್ತಪಡಿಸಿದರು.