ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದೆ ಎಂದು ಈಗಾಗ್ಲೇ ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಜೆಡಿಎಸ್ ನವರು 5 ಕಡೆ ಅವರಿಗೆ ಸಪೋರ್ಟ್ ಕೇಳಿದ್ದು, ಹೈಕಮಾಂಡ್ 4 ಕಡೆ ಎಂದಿದ್ದಾರೆ ಎಂದು ಹೇಳಿದ್ದಾರೆ. ಆದರೆ, ಇದೀಗ ಕುಮಾರಸ್ವಾಮಿ ಬೇರೆಯದೆ ಮಾತು ಹೇಳಿದ್ದಾರೆ.
ಮೈತ್ರಿ ಬಗ್ಗೆ ನಾನು ಏನೂ ಹೇಳಲಾರೆ. ಅದು ಇನ್ನೂ ಅಂತಿಮಗೊಂಡಿಲ್ಲ. ಅದಕ್ಕೆ ಇನ್ನು ಹೆಚ್ಚಿನ ಸಮಯಬೇಕು. ಯಡಿಯೂರಪ್ಪನವರು ಹೇಳಿರುವುದನ್ನು ಮೀಡಿಯಾದಲ್ಲಿ ನೋಡಿದ್ದೇನೆ. ಅವರಿಗೆ ನಾನು ಆಭಾರಿಯಾಗಿದ್ದೇನೆ. ಆದರೆ, ಊಹಾಪೋಹ ಬೇಡ ಅಂತಾ ಹೇಳಿದರು.