ಪ್ರಜಾಸ್ತ್ರ ಸುದ್ದಿ
ಸಿಂದಗಿ: ಈ ಬಾರಿಯ ಚುನಾವಣೆಯಲ್ಲಿ 35 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದೇನೆ ಅನ್ನೋ ವಿಶ್ವಾಸವನ್ನು ಶಾಸಕ, ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ವ್ಯಕ್ತಪಡಿಸಿದ್ದಾರೆ.
ಶುಕ್ರವಾರ ಪಕ್ಷದ ಕಾರ್ಯಾಲಯದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕ್ಷೇತ್ರದ ಜನತೆ ಈ ಬಾರಿ ನನ್ನ ಕೈ ಹಿಡಿಯಲಿದ್ದಾರೆ. ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಸೇರಿ ತಳವಾರ, ಕುರುಬ ಸಮಾಜದ ಮತದಾರರ ಸಂಪೂರ್ಣ ಬೆಂಬಲವಿದೆ. ಹೀಗಾಗಿ ಈ ಬಾರಿ ನನ್ನ ಗೆಲುವು ಖಚಿತ ಎಂದು ಹೇಳಿದರು.
ಈ ವೇಳೆ ಸಂಗನಗೌಡ ಪಾಟೀಲ, ಎಂ.ಎಸ್ ಹಿರೇಮಠ, ಪಿಂಟು ಆಲಮೇಲ ಅವರ ನೇತೃತ್ವದಲ್ಲಿ ನೂರಾರು ಯುವಕರು ಬಿಜೆಪಿ ಸೇರ್ಪಡೆಯಾದರು. ಮಂಡಳ ಅಧ್ಯಕ್ಷ ಈರಣ್ಣ ರಾವೂರ, ಪ್ರಧಾನ ಕಾರ್ಯದರ್ಶಿ ಗುರು ತಳವಾರ, ಸಂತೋಷ ಪಾಟೀಲ, ಶಿವಕುಮಾರ ಬಿರಾದಾರ ಸೇರಿ ಅನೇಕರು ಉಪಸ್ಥಿತರಿದ್ದರು.