ರಾತ್ರೋರಾತ್ರಿ ಬಿಜೆಪಿ ಮುಖಂಡನ ಬಂಧನ

177

ಪ್ರಜಾಸ್ತ್ರ ಸುದ್ದಿ

ಕಲಬುರಗಿ: ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಅವರನ್ನು ಶೂಟ್ ಮಾಡುವುದಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ರನ್ನು, ರಾತ್ರೋರಾತ್ರಿ ಬಂಧಿಸಲಾಗಿದೆ. ಬ್ರಹ್ಮಪುರ ಪೊಲೀಸರು ಹೈದ್ರಾಬಾದ್ ನಲ್ಲಿ ಭಾನುವಾರ ತಡರಾತ್ರಿ ಬಂಧಿಸಿದ್ದಾರೆ.

ಬಿಜೆಪಿ ಮುಖಂಡನ ಬಂಧನಕ್ಕೆ ಆಗ್ರಹಿಸಿ ಎಸ್ಪಿ ಕಚೇರಿ ಎದುರು ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಐಪಿಸಿ 506ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಸೋಮವಾರ ಕಲಬುರಗಿಗೆ ಸಿಎಂ ಬೊಮ್ಮಾಯಿ ಆಗಮಿಸುವ ವೇಳೆ ಕಪ್ಪು ಪಟ್ಟಿ ಪ್ರದರ್ಶನ ಮಾಡುವುದಾಗಿ ಕಾಂಗ್ರೆಸ್ ಹೇಳಿತ್ತು.

ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡ ಪೊಲೀಸರು, ಇಂದು ಸಿಎಂ ಬರುವ ವೇಳೆ ಏನಾದರು ಅನಾಹುತ ಸಂಭವಿಸುವ ಮೊದಲೇ ಮಣಿಕಂಠರನ್ನು ಬಂಧಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!