ಈಶ್ವರಪ್ಪ ಮನವೊಲಿಸುವ ಪ್ರಯತ್ನ

73

ಪ್ರಜಾಸ್ತ್ರ ಸುದ್ದಿ

ಶಿವಮೊಗ್ಗ: ಲೋಕಸಭೆ ಚುನಾವಣೆಯಲ್ಲಿ ಮಗನಿಗೆ ಟಿಕೆಟ್ ಸಿಗದ ಹಿನ್ನಲೆಯಲ್ಲಿ ಬಂಡಾಯವೆದ್ದಿರುವ ಬಿಜೆಪಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಮನವೊಲಿಕೆ ಯತ್ನ ನಡೆದಿದೆ. ಭಾನುವಾರ ಮುಂಜಾನೆಯಿಂದಲೇ ಅವರ ನಿವಾಸಕ್ಕೆ ಬಿಜೆಪಿ ನಾಯಕರು ಭೇಟಿ ನೀಡುತ್ತಿದ್ದಾರೆ.

ಶಾಸಕ ಆರಗ ಜ್ಞಾನೇಂದ್ರ, ಪರಿಷತ್ ಸದಸ್ಯ ಎನ್.ರವಿಕುಮಾರ್ ಮನವೊಲಿಸುವ ಪ್ರಯತ್ನ ಮಾಡಿದರೂ ಸಾಧ್ಯವಾಗದೆ ವಾಪಸ್ ಆದರು. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮೋಹನ್ ಅಗರವಾಲ್ ಸೇರಿ ಇತರರು ಭೇಟಿ ನೀಡಿದ್ದಾರೆ.

ಪ್ರಧಾನಿ ಮೋದಿ ಸೋಮವಾರ ಶಿವಮೊಗ್ಗಕ್ಕೆ ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ. ಅಷ್ಟರೊಳಗೆ ಮನವೊಲಿಸುವ ಕೆಲಸ ಯಶಸ್ವಿಯಾದರೆ ಮುಜುಗರ ತಪ್ಪಿಸಬಹುದು. ಇಲ್ಲದೆ ಹೋದರೆ ಕಾಂಗ್ರೆಸ್ ಗೆ ಆಹಾರವಾಗುವುದು ಪಕ್ಕ.




Leave a Reply

Your email address will not be published. Required fields are marked *

error: Content is protected !!