ಶಿವಮೊಗ್ಗಕ್ಕೆ ಬಿಜೆಪಿ ನಾಯಕರು ಹೋಗಿದ್ದು ಬೆಂಕಿ ಕಡ್ಡಿ ಗೀರಲು: ಕಾಂಗ್ರೆಸ್

115

ಪ್ರಜಾಸ್ತ್ರ ಸುದ್ದಿ

ಶಿವಮೊಗ್ಗ: ಈದ್ ಮಿಲಾದ್ ಸಂದರ್ಭದಲ್ಲಿ ವಿವಾದಾತ್ಮಕ ಕಟೌಟ್, ಕತ್ತಿ ಪ್ರದರ್ಶನ ಹಾಗೂ ಕಲ್ಲು ತೂರಾಟ ಘಟನೆ ಸಂಬಂಧ, ಬಿಜೆಪಿ ನಾಯಕರು ಇಂದು ಶಿವಮೊಗ್ಗಕ್ಕೆ ಭೇಟಿ ನೀಡಿದ್ದಾರೆ. ಜಿಲ್ಲಾ ಮೆಗ್ಗಾನ್ ಆಸ್ಪತ್ರೆಗೆ ನಳೀನ್ ಕುಮಾರ್ ಕಟೀಲ್, ಮಾಜಿ ಸಚಿವರಾದ ಕೆ.ಎಸ್ ಈಶ್ವರಪ್ಪ, ಆರಗ ಜ್ಞಾನಂದ್ರ, ಅಶ್ವತ್ಥನಾರಾಯಣ, ಸಂಸದ ಬಿ.ವೈ ರಾಘವೇಂದ್ರ ಸೇರಿ ಕೆಲವರು ಭೇಟಿ ನೀಡಿದ್ದಾರೆ.

ಆಸ್ಪತ್ರೆಯ ಭೇಟಿ ಬಳಿಕ ರಾಗಿಗುಡ್ಡ ಪ್ರದೇಶದಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದಕ್ಕೆ ಸತ್ಯಶೋಧನ ತಂಡ ಎಂದು ಹೇಳಿದೆ. ಇದರ ವಿರುದ್ಧ ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಎಕ್ಸ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದೆ.

ಬಿಜೆಪಿ ನಾಯಕರು ಶಿವಮೊಗ್ಗಕ್ಕೆ ಭೇಟಿ ನೀಡಿರುವುದು ಸತ್ಯ. ಮತ್ತೊಮ್ಮೆ ಬೆಂಕಿ ಕಡ್ಡಿ ಗೀರಲು ಹೋಗಿದ್ದಾರೆ ಎಂದು ವಾಗ್ದಾಳಿ ನಡೆಸಿದೆ. ಬಿಜೆಪಿ ಯಾವುದೇ ತನಿಖಾ ಸಂಸ್ಥೆ ಅಲ್ಲ. ಸತ್ಯ ಶೋಧನೆ ಮಾಡಲು ಪೊಲೀಸರಿದ್ದಾರೆ. ಕಾನೂನು ಇದೆ. ಪರಿಸ್ಥಿತಿಯನ್ನು ಹದಗೆಡಿಸಲು ಸಂಚುರೂಪಿಸಿರುವ ಬಿಜೆಪಿ ಸಂಚನ್ನು ಯಶಸ್ವಿಯಾಗಲು ಬಿಡುವುದಿಲ್ಲವೆಂದು ಕಾಂಗ್ರೆಸ್ ಕಿಡಿ ಕಾರಿದೆ.




Leave a Reply

Your email address will not be published. Required fields are marked *

error: Content is protected !!