ಪ್ರಜಾಸ್ತ್ರ ಸುದ್ದಿ
ದಾವಣಗೆರೆ: ಬಿಜೆಪಿ ಸರ್ಕಾರ ಬಂದಾಗೆಲ್ಲ ಇವರಷ್ಟೆ ಸಚಿವರಾಗಬೇಕಾ ಎಂದು ಪ್ರಶ್ನಿಸಿರುವ ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ, ನಮ್ಮ ಹಿರಿಯ ಸಚಿವರು ಕುರ್ಚಿಗೆ ಅಂಟಿಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ನಮ್ಮ ಹಿರಿಯ ನಾಯಕರಿಗೆ ತ್ಯಾಗ ಮನೋಭಾವ ಕಡಿಮೆ. ದೊಡ್ಡ ನಾಯಕ ಬಿ.ಎಸ್ ಯಡಿಯೂರಪ್ಪನವರೆ ಸಿಎಂ ಸ್ಥಾನ ಬಿಟ್ಟುಕೊಟ್ಟಿದ್ದಾರೆ. ಆದರೆ, ಹಿರಿಯ ಸಚಿವರಿಗೆ ಏನಾಗಿದೆ ಎಂದು ಸ್ವಪಕ್ಷೀಯ ಸಚಿವರ ವಿರುದ್ಧವೇ ಕಿಡಿ ಕಾರಿದ್ದಾರೆ.