ಪ್ರಜಾಸ್ತ್ರ ಸುದ್ದಿ
ವಿಜಯಪುರ: ಯುಗಾದಿ ಬಳಿಕ ಉತ್ತರ ಕರ್ನಾಟಕದವರೇ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಸ್ವಪಕ್ಷೀಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ಈ ಮೂಲಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸ್ಥಾನದ ಬದಲಾವಣೆಯ ಬಗ್ಗೆ ಮಾತ್ನಾಡಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ನಾವು ಇನ್ನು ಮುಂದೆ ಸಚಿವ ಸ್ಥಾನ ಕೊಡಿ ಎಂದು ಬೇಡುವದಿಲ್ಲ. ಸಚಿವ ಸ್ಥಾನ ಕೊಡುವವರೆ ಉತ್ತರ ಕರ್ನಾಟಕದವರೇ ಮುಖ್ಯಮಂತ್ರಿ ಆಗ್ತಾರೆ ಎಂದು ಬಿಎಸ್ವೈಗೆ ಟಾಂಗ್ ಕೊಟ್ಟಿದ್ದಾರೆ.