ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕಳೆದ ಫೆ.19ರಂದು ಭಟ್ಕಳ ಶಾಸಕ ಸುನೀಲ್ ನಾಯ್ಕ್ ಅವರ ಶಿರಾಲಿಯಲ್ಲಿರುವ ನಿವಾಸದಲ್ಲಿ ಮಾಂಸಾಹಾರ ಸೇವಿಸಿದ ಶಾಸಕ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ದೇವಸ್ಥಾನಕ್ಕೆ ಹೋಗಿದ್ದಾರೆ ಅನ್ನೋ ವಿಚಾರ ಸಿಕ್ಕಾಪಟ್ಟೆ ಟ್ರೋಲ್ ಆಗುತ್ತಿದೆ.
ನಾನು ಮಾಂಸಾಹಾರ ಸೇವಿಸಿದ್ದೇನೆ. ಆದರೆ, ದೇವಸ್ಥಾನಕ್ಕೆ ಹೋಗಿಲ್ಲ. ಬೀಗ ಹಾಕಿತ್ತು. ದೂರದಲ್ಲೇ ನಿಂತು ನಮಸ್ಕಾರ ಮಾಡಿದ್ದೇನೆ ಎಂದು ಸಿ.ಟಿ ರವಿ ಹೇಳುತ್ತಿದ್ದಾರೆ. ಆದರೆ, ಅವರು ದೇವಸ್ಥಾನಕ್ಕೆ ಹೋಗಿರುವ ಫೋಟೋ, ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಸಿಕ್ಕಾಪಟ್ಟೆ ಟ್ರೋಲ್ ಆಗುತ್ತಿವೆ.
ಈ ಹಿಂದೆ ಸಿದ್ದರಾಮಯ್ಯ ಮಾಂಸಾಹಾರ ಸೇವಿಸಿ ಧರ್ಮಸ್ಥಳಕ್ಕೆ ಹೋಗಿದ್ದರು ಎಂದು ಹೇಳಲಾಯಿತು. ಬಿಜೆಪಿ, ಹಿಂದೂಪರ ಸಂಘಟನೆಯವರು ಅವರ ವಿರುದ್ಧ ಮುಗಿಬಿದ್ದರು. ಈಗ ಸಿ.ಟಿ ರವಿ ಅವರು ಮಾಂಸಾಹಾರ ಸೇವಿಸಿ ಜೈನ್ ಸಮುದಾಯ ಪೂಜಿಸುವ ರಾಜಾಂಗಣ ನಾಗಬನ ಹಾಗೂ ಕರಿಬಂಟ ದೇವಸ್ಥಾನಕ್ಕೆ ಹೋಗಿದ್ದಾರೆ. ಈಗ ಎಲ್ಲಿ ಹೋಗಿದ್ದಾರೆ ಭಕ್ತರು ಎಂದು ಸೋಷಿಯಲ್ ಮೀಡಿಯಾದಲ್ಲಿ ತೀವ್ರ ಟ್ರೋಲ್ ಮಾಡಲಾಗುತ್ತಿದೆ.