ಬ್ರೇಕಿಂಗ್ ನ್ಯೂಸ್
Search

ಬಿಜೆಪಿಗೆ ಬಿಸಿ ತುಪ್ಪವಾದ ಶಾಸಕ ಗೂಳಿಹಟ್ಟಿ ಶೇಖರ್

183

ಪ್ರಜಾಸ್ತ್ರ ಸುದ್ದಿ

ಚಿತ್ರದುರ್ಗ: ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಮೇಲಾಟಗಳು ಜೋರಾಗಿವೆ. ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಹೊಸದುರ್ಗ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಹಾಗೂ ಖನಿಜ ನಿಗಮದ ಮಾಜಿ ಅಧ್ಯಕ್ಷ ಎಸ್.ಲಿಂಗಮೂರ್ತಿ ನಡುವೆ ಫೈಟ್ ನಡೆದಿದೆ. ಹೀಗಾಗಿ ಶಾಸಕ ಗೂಳಿಹಟ್ಟಿ ಶೇಖರ್, ಟಿಕೆಟ್ ನೀಡದಿದ್ದರೆ ಪಕ್ಷೇತರನಾಗಿ ಸ್ಪರ್ಧಿಸುತ್ತೇನೆ ಎಂದಿದ್ದಾರೆ.

ಶಾಸಕರು ಕಳಪೆ ಕಾಮಗಾರಿ ನಡೆಸಿದ್ದಾರೆ ಎಂದು ಎಸ್.ಲಿಂಗಮೂರ್ತಿ ಆರೋಪಿಸಿದ್ದರು. ಎಸ್.ಲಿಂಗಮೂರ್ತಿ ಕಡುಭ್ರಷ್ಟ ಎಂದು ಗೂಳಿಹಟ್ಟಿ ಶೇಖರ್ ಕಿಡಿ ಕಾರಿದ್ದರು. ಇವರಿಬ್ಬರ ನಡುವಿನ ಕಾದಾಟದ ರಾಜಿ ಸಂಧಾನ ಫಲ ನೀಡದೆ ಹೋದ ಪರಿಣಾಮ ಬಿಜೆಪಿ ನಾಯಕರಿಗೆ ತಲೆನೋವಾಗಿದೆ. ಶಾಸಕರ ನಡೆ ನಾಯಕರನ್ನು ಕಂಗಾಲಾಗಿಸಿದೆ. ಹೀಗಾಗಿ 2023ರ ವಿಧಾನಸಭಾ ಚುನಾವಣೆ ಟಿಕೆಟ್ ಯಾರ ಪಾಲಾಗುತ್ತೆ ಅನ್ನೋ ಕುತೂಹಲ ಕ್ಷೇತ್ರದ ಜನರಲ್ಲಿದೆ.




Leave a Reply

Your email address will not be published. Required fields are marked *

error: Content is protected !!