ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಹಿಂದೂ ದೇವತೆಗಳ ವಿರುದ್ಧ ಅವಹೇಳನಕಾರಿಯಾಗಿ ಮಾತ್ನಾಡಿದ್ದಾರೆ ಅನ್ನೋ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುರುಗೇಶ ನಿರಾಣಿ ವಿರುದ್ಧ ದೂರು ದಾಖಲಾಗಿದೆ ಎನ್ನಲಾಗ್ತಿದೆ.
ಈ ಹಿಂದೆ ವಾಟ್ಸಪ್ ಗ್ರೂಪ್ ನಲ್ಲಿ ರಾಮ, ಕೃಷ್ಣ, ವಿಷ್ಣು, ಬ್ರಹ್ಮ ಸೇರಿದಂತೆ ಹಲವು ದೇವರಗಳ ವಿರುದ್ಧ ಮೆಸೇಜ್ ಮಾಡಿರುವುದು ವೈರಲ್ ಆಗಿತ್ತು. ಆ ಸಂಬಂಧ ಅವರು ಅದರ ಬಗ್ಗೆ ಸ್ಪಷ್ಟನೆ ನೀಡಿದ್ರು. ಇದೀಗ ಅದೆ ವಿಚಾರಕ್ಕೆ ಸಂಬಂದಿಸಿದಂತೆ ಬೆಂಗಳೂರಿನ ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಹೇಳಲಾಗ್ತಿದೆ.