ಪ್ರಜಾಸ್ತ್ರ ಸುದ್ದಿ
ಅಥಣಿ: ಆಪರೇಷನ್ ಹಸ್ತ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಬಿಜೆಪಿ ಮಾಜಿ ಸಚಿವ, ಶಾಸಕ ರಮೇಶ ಜಾರಕಿಹೊಳಿ ಮಾತನಾಡಿ, ಕಾಂಗ್ರೆಸ್ ನ 25-30 ಶಾಸಕರು ಮುಂದಿನ ನಿರ್ಧಾರಕ್ಕೆ ಬೆಂಗಳೂರಿನ ಶಾಂಗ್ರಿಲಾ ಹೋಟೆಲ್ ನಲ್ಲಿ ಸೇರುವವರಿದ್ದರು, ಅದನ್ನು ಮರೆಮಾಚಲು ಇದೆಲ್ಲ ಮಹಾನಾಯಕನ ಕುತಂತ್ರ ಎಂದು ಪರೋಕ್ಷವಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗೆ ಪತ್ರ ಬರೆದ ಬಳಿಕ ಕಾಂಗ್ರೆಸ್ ಶಾಸಕರು ಸೇರುವವರಿದ್ದರು. ತನ್ನ ಪಕ್ಷಕ್ಕೆ ಅವಮಾನ ಆಗುವುದನ್ನು ತಪ್ಪಿಸಲು ಆಪರೇಷನ್ ಹಸ್ತ ಎಂದು ಪೋಸ್ ಕೊಡುತ್ತಿದ್ದಾರೆ. ಇದೆಲ್ಲವೂ ನನಗೆ ಗೊತ್ತಿದೆ ಎಂದು ರಮೇಶ ಜಾರಕಿಹೊಳಿ ಕಿಡಿ ಕಾರಿದರು.