ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಇದೀಗ ಆಪರೇಷನ್ ಹಸ್ತದ ಚರ್ಚೆ ಜೋರಾಗಿದೆ. ಬಿಜೆಪಿ, ಜೆಡಿಎಸ್ ಹಾಲಿ, ಮಾಜಿ ಶಾಸಕರಿಗೆ ಕಾಂಗ್ರೆಸ್ ಗಾಳ ಹಾಕಿದೆಯಂತೆ. ಮಾಜಿ ಸಚಿವ ಎಸ್.ಟಿ ಸೋಮಶೇಖರ್, ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ಅವರು ಸಿಎಂ, ಡಿಸಿಎಂ ಭೇಟಿ ಬಳಿಕ ಇದೀಗ ಶಾಸಕ ಶಿವರಾಮ್ ಹೆಬ್ಬಾರ್ ಭೇಟಿ ಮಾಡಿದ್ದಾರೆ.
ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್, ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಸುಮಾರು ಒಂದು ಗಂಟೆಯ ಕಾಲ ಚರ್ಚಿಸಿದ್ದಾರೆ. ಕ್ಷೇತ್ರದ ಅಭಿವೃದ್ಧಿ ವಿಚಾರದ ಬಗ್ಗೆ ಭೇಟಿಯಾಗಿದ್ದೇವೆ ಎಂದು ನಾಯಕರು ಹೇಳುತ್ತಿದ್ದಾರೆ. ಆದರೆ, ಹೀಗೆ ಬಿಜೆಪಿಯ ನಾಯಕರು ಒಬ್ಬರಾದ ಮೇಲೆ ಒಬ್ಬರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರೊಂದಿಗೆ ಚರ್ಚಿಸುತ್ತಿರುವುದು ಕುತೂಹಲ ಮೂಡಿಸಿದೆ. ಬಿಜೆಪಿ ಹಿರಿಯ ನಾಯಕರಿಗೆ ಮತ್ತಷ್ಟು ಟೆನ್ಷನ್ ನೀಡುತ್ತಿದೆ.