ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪರವಾಗಿ ಮಾತನಾಡಿದ ಬಿಜೆಪಿ ಮಾಜಿ ಸಚಿವ, ಶಾಸಕ ಎಸ್.ಟಿ ಸೋಮಶೇಖರ್ ವಿರುದ್ಧ ಬಿಜೆಪಿಯೇ ಷಡ್ಯಂತ್ರ ಮಾಡುತ್ತಿದ್ದಾರಂತೆ. ಸ್ವತಃ ಸೋಮಶೇಖರ್ ಅವರೆ ಹೇಳಿದ್ದಾರೆ.
ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ಡಿ.ಕೆ ಶಿವಕುಮಾರ್ ಪರ ಮಾತನಾಡಿದೆ. ಆದರೆ, ಬಿಜೆಪಿಯವರೇ ಬೇರೆ ರೀತಿ ಬಿಂಬಿಸುತ್ತಿದ್ದಾರೆ. ನನ್ನನ್ನು ಸೋಲಿಸಲು ಆಡಿಯೋ ವೈರಲ್ ಮಾಡಿದರು. ನಾನು ಕಾಂಗ್ರೆಸ್ಸಿಗೆ ಹೋಗುತ್ತೇನೆ ಎಲ್ಲಿಯೂ ಹೇಳಿಲ್ಲ. ಆದರೆ, ಬಿಜೆಪಿಯವರೇ ಕಳುಹಿಸುವಂತಿದೆ ಅಂತಾ ಸ್ವಪಕ್ಷೀಯವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.