ವೀರಶೈವ ಲಿಂಗಾಯತ ಸಂಘಟನೆಯಿಂದ ಯತ್ನಾಳ ಕಾರಿಗೆ ಮುತ್ತಿಗೆ

262

ಪ್ರಜಾಸ್ತ್ರ ಸುದ್ದಿ

ಚಾಮರಾಜನಗರ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ಸದಾ ಗಂಭೀರ ಆರೋಪ ಮಾಡ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಾರಿಗೆ, ವೀರಶೈವ ಲಿಂಗಾಯತ ಸಂಘಟನೆ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ.

ಯತ್ನಾಳ ಕಾರನ್ನ ಅಡ್ಡಗಟ್ಟಿದ ಸಂಘಟನೆ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ರು. ವೀರಶೈವ ಲಿಂಗಾಯತ ಸಮುದಾಯ ಒಡೆಯಲು ನೋಡುತ್ತಿದ್ದೀರಿ. ಹೋರಾಟದ ಹೆಸರಲ್ಲಿ ಸಮುದಾಯದಲ್ಲಿ ಬಿರುಕು ಮೂಡಿಸುತ್ತಿರುವ ಯತ್ನಾಳಗೆ ಧಿಕ್ಕಾರ ಎಂದು ಕೂಗಿದರು.

ಲಿಂಗಾಯಿತ ಮೀಸಲಾತಿ ಹೋರಾಟ ಕಾರ್ಯಕ್ರಮವೊಂದಕ್ಕೆ ಹೊರಟಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು, ಪರಿಸ್ಥಿತಿ ನಿಯಂತ್ರಿಸಿ ಅವರನ್ನ ಸುರಕ್ಷಿತವಾಗಿ ಕರೆದುಕೊಂಡು ಹೋಗಲಾಯ್ತು.




Leave a Reply

Your email address will not be published. Required fields are marked *

error: Content is protected !!