ಪ್ರಜಾಸ್ತ್ರ ಸುದ್ದಿ
ಬೆಳಗವಾವಿ: ಉತ್ತರ ಕರ್ನಾಟಕ ಭಾಗದವರಿಗೆ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ಸ್ಥಾನ ನೀಡಬೇಕು. ಅಲ್ಲಿಯ ತನಕ ನಾನು ಶಾಸಕಾಂಗ ಸಭೆಗೆ ಹಾಜರಾಗುವುದಿಲ್ಲ ಎನ್ನುವ ಮೂಲಕ ಬಿಜೆಪಿ ಶಾಸಕ ಯತ್ನಾಳ, ಆಕ್ರೋಶ ಹೊರ ಹಾಕಿದ್ದಾರೆ.
ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸಲು ಇಲ್ಲಿನ ಸುವರ್ಣಸೌಧಕ್ಕೆ ಆಗಮಿಸಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿ ರಾಜ್ಯಾಧ್ಯಕ್ಷನಾಗುವ ಎಲ್ಲ ಅರ್ಹತೆ ನನಗೆ ಇದೆ. ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಸರ್ಕಾರಿ ಭೂಮಿ ಲೂಟಿ ಮಾಡಿಲ್ಲ. ಅನುಕೂಲವಿದ್ದರೆ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕ ಮಾಡ್ತಾರೆ. ಇವರು ಬದಲಾಗುವ ತನಕ ನಾನು ಶಾಸಕಾಂಗ ಪಕ್ಷದ ಸಭೆಗೆ ಹೋಗುವುದಿಲ್ಲವೆಂದು ಹೇಳಿದರು.