ಪ್ರಜಾಸ್ತ್ರ ಸುದ್ದಿ
ಬೆಳಗಾವಿ: ಬಿಜೆಪಿಯ ಯಾವ ಶಾಸಕರು ಕಾಂಗ್ರೆಸ್ಸಿಗೆ ಹೋಗಲ್ಲ. ಈ ಬಗ್ಗೆ ಯಾರೂ ಎಲ್ಲಿಯೂ ಹೇಳಿಲ್ಲ. ಇದೆಲ್ಲ ಊಹಾಪೋಹ ಎಂದು ಬಿಜೆಪಿ ಮಾಜಿ ಸಚಿವ ಗೋವಿಂದ್ ಕಾರಜೋಳ ಹೇಳಿದ್ದಾರೆ.
ಸರ್ಕಾರ ರಚನೆಯಾಗಿ ಮೂರು ತಿಂಗಳಾಗಿದೆ. ಆದರೆ, ಅಭಿವೃದ್ಧಿ ಕಾರ್ಯ ಶೂನ್ಯ. ವರ್ಗಾವಣೆ ದಂಧೆ ನಡೆಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಯಾರು ಹೋಗುತ್ತಾರೆ. ರಾತ್ರಿ ಕಂಡ ಭಾವಿಗೆ ಹಗಲು ಯಾರು ಬೀಳುವುದಿಲ್ಲ ಎನ್ನುವುದು ನನ್ನ ಅಭಿಪ್ರಾಯ ಅಂತಾ ಹೇಳಿದರು.
ಕಾಂಗ್ರೆಸ್, ಜೆಡಿಎಸ್ ನಿಂದ ಈ ಹಿಂದೆ ಬಿಟ್ಟು ಹೋದವರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಅನ್ನೋ ಮಾತುಗಳು ಜೋರಾಗಿವೆ. 10-15 ಶಾಸಕರು ಕೈ ಹಿಡಿಯುತ್ತಾರೆ ಎನ್ನಲಾಗುತ್ತಿದೆ. ಆದರೆ, ಇದರಲ್ಲಿ ಯಾರೆಲ್ಲ ಇದಾರೆ ಅನ್ನೋದು ಬಹಿರಂಗವಾಗಿಲ್ಲ. ಈ ಬಗ್ಗೆ ಯಾರೂ ಬಹಿರಂಗವಾಗಿ ಹೇಳಿಕೆ ಸಹ ಕೊಟ್ಟಿಲ್ಲ. ಹೀಗಾಗಿ ಈ ವಿಚಾರದಲ್ಲಿ ಕುತೂಹಲ ಮೂಡಿಸಿದೆ.