ಬಿಜೆಪಿ ಸಂಸದರಿಂದ ವೇದಿಕೆ ಮೇಲೆಯೇ ಕುಸ್ತಿಪಟುವಿನ ಮೇಲೆ ಹಲ್ಲೆ

185

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಕೇಂದ್ರ ಕುಸ್ತಿ ಆಯೋಗದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಯುವ ಕುಸ್ತಿಪಟುವಿನ ಮೇಲೆ ವೇದಿಕೆ ಮೇಲೆಯೇ ಹಲ್ಲೆ ಮಾಡಿದ್ದಾರೆ. ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಪ್ರತಿಭಟನೆ ನಡೆಸಲಾಗುತ್ತಿದೆ. ಇದನ್ನು ಪ್ರಶ್ನಿಸಲು ಹೋದ ಕುಸ್ತಿಪಟುವಿನ ಕಪಾಳಕ್ಕೆ ಹೊಡೆದಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಭೂಷಣ್ ಶರಣ್ ಸಿಂಗ್, ಕುಸ್ತಿ ಆಟಗಾರರ ವಯೋಮಾನದ ವಿಚಾರಕ್ಕೆ ಸಂಬಂಧಿಸಿದಂತೆ ಆ ಹುಡುಗ ವೇದಿಕೆ ಮೇಲೆ ಬಂದು ಚಾಂಪಿಯನಶಿಪ್ ಗೆ ಪರಿಗಣಿಸಿ ಎಂದು ಹೇಳುತ್ತಿದ್ದ. 5 ಕುಸ್ತಿ ಆಟಗಾರರು ಇದೆ ರೀತಿ ವಂಚನೆ ಮಾಡಿದ್ದಾರೆ. ಉತ್ತರ ಪ್ರದೇಶ, ದೆಹಲಿ, ಹರಿಯಾಣ್ ಸೇರಿದಂತೆ ಯಾವುದೇ ರಾಜ್ಯದಲ್ಲಿ ನಡೆದರೆ ಕುಸ್ತಿ ಆಟ ಅಭಿವೃದ್ಧಿ ಪಡಿಸಲು ಸಾಧ್ಯವಿಲ್ಲವೆಂದು ಸಮರ್ಥಿಸಿಕೊಂಡಿದ್ದಾರೆ.

ಕೇಂದ್ರ ಕುಸ್ತಿ ಆಯೋಗದ ಅಧ್ಯಕ್ಷರಾಗಿರುವ ಭೂಷಣ್ ಶರಣ್ ಸಿಂಗ್, ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿದ್ದಾರೆ. ಗುರುವಾರ ದೆಹಲಿಯ ಜಂತರ್ ಮಂತರ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಮನ್ ವೆಲ್ತ್ ನಲ್ಲಿ ಪದಕ ಪಡೆದಿರುವ ಅಂತಾರಾಷ್ಟ್ರೀಯ ಮಟ್ಟದ ಕುಸ್ತಿಪಟುಗಳಾದ ವಿನೇಶ್ ಪೊಗೆಟ್, ಸಾಕ್ಷಿ ಮಲಿಕ್, ಬಜರಂಗ್ ಪೂನಿಯಾ ಸೇರಿದಂತೆ ಹಿರಿಯ ಆಟಗಾರರು ಭಾಗವಹಿಸಿದ್ದರು.




Leave a Reply

Your email address will not be published. Required fields are marked *

error: Content is protected !!